Hoskote Accident | ಹೊಸಕೋಟೆ ಬಳಿ ಲಾರಿ-ಬಸ್ ನಡುವೆ ಭೀಕರ ಅಪಘಾತ..!

ಬೆಂಗಳೂರು ಗ್ರಾಮಾಂತರ | ಬೆಳ್ಳಂಬೆಳಗ್ಗೆ ಹೊಸಕೋಟೆ (Hoskote Accident) ರಾಷ್ಟ್ರೀಯ ಹೆದ್ದಾರಿ 75 ರ ಗೊಟ್ಟಿಪುರ ಗೇಟ್ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಈ ಪೈಕಿ ಇಬ್ಬರು ಪುಟ್ಟ ಮಕ್ಕಳು ಸೇರಿದ್ದಾರೆ. ಈ ಘಟನೆ ಹೊಸಕೋಟೆ ತಾಲ್ಲೂಕಿನಲ್ಲಿ ಇಂದು ಬೆಳಿಗ್ಗೆ ಸುಮಾರು 4 ಗಂಟೆಯ ಸುಮಾರಿಗೆ ನಡೆದಿದೆ.

ಹೊಸಕೋಟೆ (Hoskote Accident) ಬಳಿ ಬಸ್ ಗೆ ಡಿಕ್ಕಿಹೊಡೆದ ಲಾರಿ

ಆಂಧ್ರ ಪ್ರದೇಶದ ತಿರುಪತಿಯಿಂದ ಕೋಲಾರ ಮಾರ್ಗವಾಗಿ ಬರುವ ರಾಜ್ಯ ರಸ್ತೆ ಸಾರಿಗೆ ಬಸ್ಸಿಗೆ, ಒಂದೇ ಮಾರ್ಗದಲ್ಲಿ ಓವರ್‌ಟೇಕ್ ಮಾಡಲು ಯತ್ನಿಸಿದ್ದ ಲಾರಿ ಬಲಭಾಗದಿಂದ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ. ಢಿಕ್ಕಿಯ ತೀವ್ರತೆಗೆ ಬಸ್ ಹಿನ್ನಿಲೆಯಲ್ಲಿ ಕುಳಿತಿದ್ದ ಪ್ರಯಾಣಿಕರು ತೀವ್ರವಾಗಿ ಗಾಯಗೊಂಡಿದ್ದು, ನಾಲ್ವರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮೃತಪಟ್ಟವರನ್ನು ಕೇಶವರೆಡ್ಡಿ (44), ತುಲಸಿ (23), ಯತ್ವಿಕ್ (1), ಪ್ರನತಿ (4) ಎನ್ನಲಾಗಿದ್ದು ಎಲ್ಲರೂ ತಿರುಪತಿ ಜಿಲ್ಲೆಯವರಾಗಿದ್ದಾರೆ.  ಅಪಘಾತದ ಪರಿಣಾಮವಾಗಿ ಸುಮಾರು 20ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗಳಿಗೆ ಕರೆದೊಯ್ಯಲಾಗಿದೆ. ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಇದನ್ನು ಓದಿ : J C Madhuswamy | ಜೆ ಸಿ ಮಾಧುಸ್ವಾಮಿ ಕಾಂಗ್ರೆಸ್ ಸೇರ್ಪಡೆ ಗೊಂದಲಗಳಿಗೆ ತೆರೆ..!

ಘಟನೆಯ ಮಾಹಿತಿ ಪಡೆದಿದ್ದ ಹೊಸಕೋಟೆ ಸಂಚಾರಿ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳೂ ಭೇಟಿ ನೀಡಿ ಪರಿಶೀಲನೆ ಕೈಗೊಂಡಿದ್ದಾರೆ.

ಈ ಭೀಕರ ಅಪಘಾತವು ನಿದ್ದೆ ಮತ್ತು ಅಜಾಗರೂಕ ಚಾಲನೆಯ ಪರಿಣಾಮವಾಗಿದೆ ಎಂದು ಪ್ರಾಥಮಿಕ ಮಾಹಿತಿ ನೀಡಲಾಗಿದೆ. ಈ ಸಂಬಂಧ ಹೊಸಕೋಟೆ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸುತ್ತಿದ್ದಾರೆ.

One thought on “Hoskote Accident | ಹೊಸಕೋಟೆ ಬಳಿ ಲಾರಿ-ಬಸ್ ನಡುವೆ ಭೀಕರ ಅಪಘಾತ..!

Leave a Reply

Your email address will not be published. Required fields are marked *