Bike Taxi Ban | ಬೈಕ್ ಟ್ಯಾಕ್ಸಿ ಹೈಕೋರ್ಟ್ ನಿಷೇಧ ಮಾಡಿದ್ದು ಇದೆ ಕಾರಣಕ್ಕೆ..?

ಬೆಂಗಳೂರು | ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ (Bike Taxi Ban) ಸೇವೆಗಳಿಗೆ ಹೈಕೋರ್ಟ್ ನಿಷೇಧ ಹೇರಿದ್ದು, ಇಂದು ಬೆಳಿಗ್ಗೆಯಿಂದಲೇ ನಗರದಲ್ಲಿ ಆರ್‌ಟಿಒ ಇಲಾಖೆ ಬೃಹತ್ ಕಾರ್ಯಾಚರಣೆ ನಡೆಸಿದ್ದು, ಹಲವು ಬೈಕ್ ಟ್ಯಾಕ್ಸಿಗಳನ್ನು ಸೀಜ್ ಮಾಡಲಾಗಿದೆ.

ರಾಜಾಜಿನಗರ, ಯಶವಂತಪುರ ಸೇರಿದಂತೆ ಹಲವೆಡೆ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು ನಿಯಮ ಉಲ್ಲಂಘಿಸಿದ ಹಲವಾರು ಬೈಕ್ ಟ್ಯಾಕ್ಸಿಗಳನ್ನು (Bike Taxi Ban) ವಶಕ್ಕೆ ಪಡೆದಿದ್ದಾರೆ.

ಬೈಕ್ ಟ್ಯಾಕ್ಸಿ (Bike Taxi Ban) ಗ್ರಾಹಕರ ಮೇಲೆ ಚಾಲಕನಿಂದ ಹಲ್ಲೆ

ಇದೀಗ ಬೈಕ್ ಟ್ಯಾಕ್ಸಿ ಸೇವೆಗಳ ಬಗ್ಗೆ ಚರ್ಚೆಗೆ ಕಾರಣವಾದ ಘಟನೆ ಜಯನಗರದಲ್ಲಿ ನಡೆದಿದೆ. ಬಿಟಿಎಂ ಲೇಔಟ್‌ನಿಂದ ರ್ಯಾಪಿಡೋ ಬೈಕ್ ಟ್ಯಾಕ್ಸಿ ಬುಕ್ ಮಾಡಿಕೊಂಡಿದ್ದ ಶ್ರೇಯಾ ಎಂಬ ಯುವತಿ ಜಯನಗರ ಮೂರನೇ ಬ್ಲಾಕ್ ಗೆ ಪ್ರಯಾಣಿಸುತ್ತಿದ್ದ ವೇಳೆ, ಬೈಕ್ ಚಾಲಕ ಸುಹಾಸ್ ನಿಯಮಗಳನ್ನು ಮೀರಿ ಪ್ರತಿಯೊಂದು ಸಿಗ್ನಲ್ ಜಂಪ್ ಮಾಡುತ್ತಿದ್ದ. ಈ ಬಗ್ಗೆ ಪ್ರಶ್ನೆ ಮಾಡಿದ ಶ್ರೇಯಾಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ, ಬೈಕ್ ನಿಲ್ಲಿಸಿ ನಡು ರಸ್ತೆಯಲ್ಲಿಯೇ ಹಲ್ಲೆ ನಡೆಸಿದ್ದಾನೆ.

ಇದನ್ನು ಓದಿ : Inter Caste Marriage | ಅಂತರ್ಜಾತಿ ವಿವಾಹಗಳು ಹೆಚ್ಚಾಗಬೇಕು – ಸಿದ್ದರಾಮಯ್ಯ

ಚಾಲಕನ ಹಲ್ಲೆಗೆ ಶ್ರೇಯಾ ರಸ್ತೆ ಮೇಲೆ ಬಿದ್ದಿದ್ದಾರೆ. ಈ ಘಟನೆ ಜಯನಗರ ಬಾಟ ಶೋರೂಂ ಬಳಿ ನಡೆದಿದೆ. ಹಲ್ಲೆಗೊಳಗಾದ ಯುವತಿ ದೀಪಿಕಾ ಜಯನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಆರೋಪಿಯಾಗಿರುವ ಬೈಕ್ ಟ್ಯಾಕ್ಸಿ ರೈಡರ್ ಸುಹಾಸ್ ವಿರುದ್ಧ ಕ್ರಮಕೈಗೊಳ್ಳಲಾಗಿದೆ.

ಈ ನಡುವೆ, ಹೈಕೋರ್ಟ್ ಏಕಸದಸ್ಯ ಪೀಠದ ಆದೇಶದಂತೆ ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿ ಸೇವೆಗಳನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಸಾರ್ವಜನಿಕರ ಸುರಕ್ಷತೆ ಮತ್ತು ನಿಯಮಬದ್ಧ ಸೇವೆಗಳ ಅಗತ್ಯತೆಯನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಕ್ರಮ ಕೈಗೊಂಡಿದೆ.

Leave a Reply

Your email address will not be published. Required fields are marked *