ತುಮಕೂರು | ಆರ್ಸಿಬಿ (RCB Tragedy) ವಿಜಯೋತ್ಸವ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ 11 ಜನರು ಮೃತರಾದ ಘಟನೆಗೆ ನೈತಿಕ ಹೊಣೆ ಹೊತ್ತು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ರಾಜೀನಾಮೆ ನೀಡಬೇಕೆಂದು ಜಿಲ್ಲಾ ಬಿಜೆಪಿ ಒತ್ತಾಯಿಸಿದೆ. ಸೋಮವಾರ ನಗರದ ಬಿಜಿಎಸ್ ವೃತ್ತದಲ್ಲಿ ಜಿಲ್ಲಾ ಬಿಜೆಪಿ (BJP Protest) ವತಿಯಿಂದ ಭಾರೀ ಪ್ರತಿಭಟನೆ ನಡೆಯಿತು.
ಆರ್ ಸಿ ಬಿ ಕಾಲ್ತುಳಿತ ಖಂಡಿಸಿ ಸರ್ಕಾರದ ವಿರುದ್ಧ ಬಿಜೆಪಿ (BJP Protest) ಆಕ್ರೋಶ
ಪ್ರತಿಭಟನೆಯಲ್ಲಿ ಮಾನವ ಸರಪಳಿ ರೂಪಿಸಿ ಸರ್ಕಾರ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಶಾಸಕ ಬಿ. ಸುರೇಶ್ ಗೌಡ ಮಾತನಾಡಿ, ಪ್ರತಿಯೊಂದು ವಿಚಾರಕ್ಕೂ ಟಿಪ್ಪಣಿ ನೀಡುವ ಸಂತೋಷ್ ಲಾಡ್, ಪ್ರಿಯಾಂಕ್ ಖರ್ಗೆ ಇಂದು ಮೌನ ಯಾಕೆ? ಎಂದು ಪ್ರಶ್ನಿಸಿದರು. ರಾಜ್ಯ ಸರ್ಕಾರದ ಅವ್ಯವಸ್ಥಿತ ಯೋಜನೆಯಿಂದಲೇ ಈ ದುರಂತ ಸಂಭವಿಸಿದೆ ಎಂದರು.
ಇದನ್ನು ಓದಿ : Youth Entrepreneurs | ವಿದ್ಯಾಭ್ಯಾಸದ ಜೊತೆಗೆ ಬಿಸಿನೆಸ್ : ಯುವಕರಿಗೆ ಇಲ್ಲಿದೆ ಬೆಸ್ಟ್ ಟಿಪ್ಸ್..!
ಈ ಸಂದರ್ಭ ಪೊಲೀಸ್ ಅಧಿಕಾರಿ ದಯಾನಂದ್ ಅವರ ಅಮಾನತು ಹಾಗೂ ನಿರಪರಾಧಿ ಪೊಲೀಸ್ ಸಿಬ್ಬಂದಿ ವಿರುದ್ಧದ ಕ್ರಮ ಖಂಡಿಸಿದರು. ಸಿಎಂ ಹಾಗೂ ಡಿಸಿಎಂ ರಾಜಕೀಯ ಲಾಭಕ್ಕಾಗಿ ವಿಜಯೋತ್ಸವ ಆಯೋಜಿಸಿ ನೂರಾರು ಜೀವಗಳನ್ನು ಅಪಾಯಕ್ಕೆ ನೂಕಿದ್ದಾರೆ ಎಂದು ಕಿಡಿಕಾರಿದರು.

ಶಾಸಕ ಜ್ಯೋತಿಗಣೇಶ್ ಮಾತನಾಡಿ, ಚಿನ್ನಸ್ವಾಮಿ ಸ್ಟೇಡಿಯಂ ಅಥವಾ ಬೃಹತ್ ಮೈದಾನದಲ್ಲಿ ಆಯೋಜಿಸಿದ್ದರೆ, ಈ ದುರಂತ ತಪ್ಪಿಸಬಹುದಿತ್ತು, ಸರಿಯಾದ ವ್ಯವಸ್ಥೆ ಇಲ್ಲದಿರುವುದೇ ಮುಖ್ಯ ತಪ್ಪಾಗಿದೆ ಎಂದು ಹೇಳಿದರು.
One thought on “BJP Protest | ಸಿಎಂ, ಡಿಸಿಎಂ ರಾಜೀನಾಮೆಗೆ ತುಮಕೂರು ಬಿಜೆಪಿ ಆಗ್ರಹ..!”