KPTCL Recruitment | ಖಾಲಿ ಇರುವ 35,000 ಹುದ್ದೆಗಳು ಹಂತ ಹಂತವಾಗಿ ಭರ್ತಿ – ಸಿಎಂ ಸಿದ್ದರಾಮಯ್ಯ

ಬೆಂಗಳೂರು |  ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ (KPTCL Recruitment) ನೌಕರರ ಸಂಘದ ವಜ್ರಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ವಿದ್ಯುತ್ ಪ್ರಸರಣ ಇಲಾಖೆಯಲ್ಲಿ ಖಾಲಿ ಇರುವ 35,000 ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು ಎಂದು ಘೋಷಿಸಿದರು.

532 ಪೌರ ಕಾರ್ಮಿಕರ ಹುದ್ದೆಗಳನ್ನು (KPTCL Recruitment) ಕಾಯಂ

ಇದೇ ವೇಳೆ 532 ಪೌರ ಕಾರ್ಮಿಕರ ಹುದ್ದೆಗಳನ್ನು ಕಾಯಂ ಮಾಡುತ್ತಿರುವುದಾಗಿ ತಿಳಿಸಿದ್ದಾರೆ. ನಮ್ಮದು ನುಡಿದಂತೆ ನಡೆಯುವ ಸರ್ಕಾರ. ನೌಕರರ (KPTCL Recruitment) ಬೇಡಿಕೆಗಳನ್ನು ಪರಿಶೀಲಿಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತೇವೆ ಎಂದರು.

NPS ಅನ್ನು ಜಾರಿಗೆ ತಂದದ್ದು ಕೇಂದ್ರ ಸರ್ಕಾರ. ಆದರೆ ನಾವು ನಮ್ಮ ಪ್ರಣಾಳಿಕೆಯಲ್ಲಿ OPS ಜಾರಿಗೆ ಘೋಷಿಸಿದ್ದೇವೆ. ಈ ಕುರಿತು ಚರ್ಚಿಸಿ ಕ್ರಮ ಕೈಗೊಳ್ಳುತ್ತೇವೆ ಎಂದು ಸ್ಪಷ್ಟಪಡಿಸಿದರು.

ಇದನ್ನು ಓದಿ : Bangalore Guinness Record | ಗಿನ್ನಿಸ್ ವರ್ಲ್ಡ್ ರೆಕಾರ್ಡ್ ಮಾಡಿದ ಬೆಂಗಳೂರು..!

ವಿದ್ಯುತ್ ಉತ್ಪಾದನೆಯ ಇತಿಹಾಸವನ್ನೂ ಸ್ಮರಿಸಿದ ಅವರು, ಇಡೀ ಏಷ್ಯಾದಲ್ಲಿಯೇ ಮೊದಲ ವಿದ್ಯುತ್ ಉತ್ಪಾದನೆ 1902ರಲ್ಲಿ ಕರ್ನಾಟಕದಲ್ಲಿಯೇ ನಡೆದಿದೆ. 1905ರಲ್ಲಿ ಬೆಂಗಳೂರಿನಲ್ಲಿ ಮೊದಲ ವಿದ್ಯುತ್ ಕಂಪನಿಯು ಆರಂಭವಾಯಿತು. ಇಂದು ನಾವು 34,000 ಮೆಘಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡುತ್ತಿರುವ ಹೆಗ್ಗಳಿಕೆಗೆ ಪಾತ್ರರಾಗಿದ್ದೇವೆ ಎಂದು ಅಭಿಮಾನದಿಂದ ಹೇಳಿದರು.

ರೈತರಿಗೆ ಪಂಪ್‌ಸೆಟ್‌ಗಳಿಗೆ ಹಗಲು 7 ಗಂಟೆ ವಿದ್ಯುತ್ ಪೂರೈಕೆ ಗುರಿಯನ್ನು ನಾವು ಇಟ್ಟುಕೊಂಡಿದ್ದೇವೆ. 60,000 ಮೆಘಾವ್ಯಾಟ್ ಉತ್ಪಾದನೆ ತಲುಪಿದ ನಂತರ ಈ ಗುರಿ ಸಾಧ್ಯವಾಗಲಿದೆ ಎಂದು ತಿಳಿಸಿದರು.

Leave a Reply

Your email address will not be published. Required fields are marked *