ಬೆಂಗಳೂರು | ಕರ್ನಾಟಕದಲ್ಲಿ ಮುಂಗಾರು (Monsoon Alert) ಚುರುಕುಗೊಂಡಿದ್ದು, ಮುಂದಿನ ಐದು ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಹಲವಾರು ಜಿಲ್ಲೆಗಳಿಗೆ ರೆಡ್ ಅಲರ್ಟ್, ಆರೆಂಜ್ ಅಲರ್ಟ್ ಹಾಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
KSNDMC (ಕರ್ನಾಟಕ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ) ಪ್ರಕಟಿಸಿದ ವರದಿಯ ಪ್ರಕಾರ, ಉತ್ತರ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಗುಡುಗು-ಸಿಡಿಲು ಸಹಿತ ಭಾರೀ ಮಳೆಯ ಸಾಧ್ಯತೆ ಇದೆ.
ಜೂನ್ 12 – ರೆಡ್/ಆರೆಂಜ್/ಯೆಲ್ಲೋ (Monsoon Alert) ಅಲರ್ಟ್
ರೆಡ್ ಅಲರ್ಟ್ : ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು
ಆರೆಂಜ್ ಅಲರ್ಟ್ : ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ವಿಜಯನಗರ, ಬಳ್ಳಾರಿ, ದಾವಣಗೆರೆ, ಹಾಸನ
ಯೆಲ್ಲೋ ಅಲರ್ಟ್ : ಬೀದರ್, ಕಲ್ಬುರ್ಗಿ, ಯಾದಗಿರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ರಾಮನಗರ, ಮಂಡ್ಯ
ಜೂನ್ 13 – ಪ್ರಮುಖ ಜಿಲ್ಲೆಗಳ ಮುನ್ಸೂಚನೆ
ರೆಡ್ ಅಲರ್ಟ್: ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ, ಚಿಕ್ಕಮಗಳೂರು
ಆರೆಂಜ್ ಅಲರ್ಟ್: ಬೆಳಗಾವಿ, ಧಾರವಾಡ, ಗದಗ, ಹಾಸನ, ಕೊಡಗು
ಯೆಲ್ಲೋ ಅಲರ್ಟ್: ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಚಾಮರಾಜನಗರ, ಮೈಸೂರು, ತುಮಕೂರು
ಇದನ್ನು ಓದಿ : AI Attendance | ಶಿಕ್ಷಕರ ನೇಮಕಾತಿ ಬಗ್ಗೆ ಸಚಿವ ಮಧು ಬಂಗಾರಪ್ಪ ಬಿಗ್ ಅಪ್ ಡೇಟ್
ಜೂನ್ 14 – ಮುಂಗಾರು ಮತ್ತಷ್ಟು ಗಂಭೀರ
ರೆಡ್ ಅಲರ್ಟ್: ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು
ಆರೆಂಜ್ ಅಲರ್ಟ್: ಬೆಳಗಾವಿ, ಧಾರವಾಡ, ಹಾವೇರಿ, ಹಾಸನ, ಮೈಸೂರು
ಯೆಲ್ಲೋ ಅಲರ್ಟ್: ಬೀದರ್, ಕಲ್ಬುರ್ಗಿ, ವಿಜಯಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಇತರ ಎಲ್ಲ ಜಿಲ್ಲೆಗಳು

ಮಹತ್ವದ ಸೂಚನೆಗಳು
- ಪ್ರವಾಹ ಪ್ರದೇಶಗಳಿಗೆ ಭೇಟಿ ನೀಡದಿರಿ
- ವಿದ್ಯುತ್ ಕಂಬಗಳು, ಮರಗಳ ಕೆಳಗೆ ನಿಲ್ಲಬೇಡಿ
- ಮಕ್ಕಳನ್ನು ಸುರಕ್ಷಿತ ಸ್ಥಳದಲ್ಲಿಡಿ
- ರೈತರು ತಮ್ಮ ಕೃಷಿ ಉತ್ಪನ್ನಗಳನ್ನು ಸುರಕ್ಷಿತವಾಗಿಡಿ