ತುಮಕೂರು | ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರು, ಜೆಡಿಎಸ್ ಪಕ್ಷ ಮುಳುಗುತ್ತಿರುವ ಹಡಗಲ್ಲ, ಪಕ್ಷದ ಹಿರಿಯ ನಾಯಕರು ಸದಾ ಕಾರ್ಯದಲ್ಲಿ ತೊಡಗಿದ್ದಾರೆ ಎಂದು ಹೇಳಿದರು.
ನಗರದ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಪ್ರಧಾನಿ ದೇವೇಗೌಡರು ಮತ್ತು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಪಕ್ಷದ ಪರ ಹೋರಾಟ ನಡೆಸುತ್ತಿದ್ದಾರೆ. ಕಾರ್ಯಕರ್ತರು ಹಾಗೂ ಜನರ ಧ್ವನಿಯಾಗಿ ಕೆಲಸ ಮಾಡುತ್ತಿದ್ದಾರೆ ಎಂದರು.
ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ನಿಖಿಲ್ (Nikhil Kumaraswamy) ಸಲಹೆ
ಜಿಲ್ಲಾ ಪಂಚಾಯ್ತಿ, ತಾಲ್ಲೂಕು ಪಂಚಾಯ್ತಿ ಹಾಗೂ ಬಿಬಿಎಂಪಿ ಚುನಾವಣೆಗಳನ್ನು ವಿಳಂಬ ಮಾಡುತ್ತಿರುವ ರಾಜ್ಯ ಸರ್ಕಾರ ತಕ್ಷಣ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಅವರು ಒತ್ತಾಯಿಸಿದರು.
ರಾಜ್ಯದ ಹಿತಕ್ಕಾಗಿ ಜೆಡಿಎಸ್ ಮತ್ತು ಬಿಜೆಪಿಯ ನಡುವಿನ ಹೊಂದಾಣಿಕೆ ಮುಂದುವರಿಯಲಿದೆ. ಮುಂಬರುವ ಎಲ್ಲ ಚುನಾವಣೆಗೆ ಸಂಘಟನೆ ಮಾಡಲಾಗುತ್ತಿದೆ. ಶಾಸಕರ ಸ್ಥಾನಕ್ಕೆ ಯಾರು ಸ್ಪರ್ಧಿಸಿದರೂ, ಪಕ್ಷ ಗೆಲುವಿಗೆ ಶ್ರಮಿಸುತ್ತಿದೆ ಎಂದರು.
ಹೇಮಾವತಿ ನೀರಿನ ಲಿಂಕ್ ಕೆನಾಲ್ ಯೋಜನೆಗೆ ರಾಜ್ಯ ಸರ್ಕಾರ ರಾಜಕೀಯ ಕಾರಣಗಳಿಂದ ಜಟಾಪಟಿ ಉಂಟುಮಾಡುತ್ತಿದೆ ಎಂದು ಆರೋಪಿಸಿದರು. ರೈತರ ಸಮಸ್ಯೆ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಯಾವುದೇ ಸಭೆ ನಡೆಸಿಲ್ಲ ಎಂದು ದೂರು ನೀಡಿದರು.
ಇದನ್ನು ಓದಿ : Bike Taxi Ban | ಬೈಕ್ ಟ್ಯಾಕ್ಸಿ ಹೈಕೋರ್ಟ್ ನಿಷೇಧ ಮಾಡಿದ್ದು ಇದೆ ಕಾರಣಕ್ಕೆ..?
ಮಾಜಿ ಪ್ರಧಾನಿ ದೇವೇಗೌಡ ಮತ್ತು ಕುಮಾರಸ್ವಾಮಿ ಅವರು ರಾಜ್ಯ ಪ್ರವಾಸಕ್ಕೆ ಚಾಲನೆ ನೀಡಿದ್ದಾರೆ. ಮುಂದಿನ 60 ದಿನಗಳ ಕಾಲ ಸದಸ್ಯತ್ವ ನೋಂದಣಿ ಕಾರ್ಯ ಜೋರಾಗಿ ನಡೆಯಲಿದೆ ಎಂದರು.
ಜೆಡಿಎಸ್ ಎಲ್ಪಿ ನಾಯಕ ಸಿ.ಬಿ. ಸುರೇಶ್ ಬಾಬು ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯವೈಖರಿ ಜನರನ್ನು ತೊಂದರೆಗೊಳಿಸುತ್ತಿದೆ. ಅದು ಈಗ ಮುಳುಗುತ್ತಿರುವ ಹಡಗು. ನಮ್ಮ ಶಾಸಕರು ಆ ಪಕ್ಷಕ್ಕೆ ಹೋಗುವ ಮನಸ್ಥಿತಿ ಹೊಂದಿಲ್ಲ ಎಂದು ಹೇಳಿದರು.

ಹೇಮಾವತಿ ನೀರನ್ನು ಉಪಮುಖ್ಯಮಂತ್ರಿಯ ಕ್ಷೇತ್ರಗಳಿಗೆ ಕೊಂಡೊಯ್ಯಲು ಅಕ್ರಮ ಪ್ರಯತ್ನ ನಡೆಯುತ್ತಿದೆ. ಮೊದಲಿಗೆ ನಾಲೆಯ ಕೊನೆಯ ಭಾಗದ ರೈತರಿಗೆ ನೀರು ಹರಿಯಬೇಕು ಎಂಬುದೇ ನಮ್ಮ ನಿಲುವು ಎಂದು (Nikhil Kumaraswamy) ಅವರು ಹೇಳಿದರು.