ವಿಜಯನಗರ | ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ (Shivaraj Tangadagi) ಅವರ ಸ್ಪೇರ್ ಕಾರು ಮತ್ತು ಬೆಂಗಾವಲು ಪಡೆಯ ವಾಹನಕ್ಕೆ ಅಪಘಾತ ಸಂಭವಿಸಿದ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲ್ಲೂಕಿನ ಕಾನಹೊಸಳ್ಳಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ನಡೆದಿದೆ.
ಶಿವರಾಜ್ ತಂಗಡಗಿ (Shivaraj Tangadagi) ಬೆಂಗಾವಲು ಪಡೆ ಕಾರು ಅಪಘಾತ
ಅಪಘಾತದಲ್ಲಿ ಬೆಂಗಾವಲು ಪಡೆಯ ಎಎಸ್ಐಗೆ ಸಣ್ಣ ಪುಟ್ಟ ಗಾಯಗಳು ಮತ್ತು ಒಳಪೆಟ್ಟುಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ತಕ್ಷಣ ಗಾಯಾಳು ಪೊಲೀಸ್ ಸಿಬ್ಬಂದಿಯನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಕನಕಗಿರಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದ್ದು, ಅಪಘಾತದ ತಕ್ಷಣದಿಂದಲೇ ಕೂಡ್ಲಿಗಿ ಡಿವೈಎಸ್ಪಿ ಮಲ್ಲೇಶ್ ದೊಡ್ಡಮನಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.
ಇದನ್ನು ಓದಿ : Tumakuru Police | ಮಿಂಚಿನ ಕಾರ್ಯಚರಣೆ ನಡೆಸಿ 170 ಆರೋಪಿಗಳನ್ನು ಬಂಧಿಸಿದ ಪೊಲೀಸರು..!
ಗಾಯಾಳು ಎಎಸ್ಐ ಯನ್ನು ತಕ್ಷಣ ದಾವಣಗೆರೆ ಜಿಲ್ಲೆಯ ಜಗಳೂರು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಅವು ಗಂಭೀರ ಗಾಯಗಳು ಅಲ್ಲವೆಂದು ವೈದ್ಯರು ತಿಳಿಸಿರುವುದು ತಿಳಿದುಬಂದಿದೆ. ಆದ್ದರಿಂದ ಅವರು ಅಪಾಯದಿಂದ ಪಾರಾಗಿದ್ದಾರೆ.

ಅಪಘಾತದ ಬಳಿಕ ಸಚಿವ ಶಿವರಾಜ್ ತಂಗಡಗಿ (Shivaraj Tangadagi) ತಮ್ಮ ಕಾರಿನಲ್ಲಿ ಬೆಂಗಳೂರಿನತ್ತ ಪ್ರಯಾಣ ಮುಂದುವರಿಸಿದ್ದಾರೆ.
One thought on “Shivaraj Tangadagi | ಸಚಿವ ಶಿವರಾಜ್ ತಂಗಡಗಿ ಕಾರು ಅಪಘಾತ..!”